ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya
error: Content is protected !!