25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಹಿಂಭಾಗದಿಂದ ಏಣಿಯ ಮೂಲಕ ಒಂದನೇ ಮಹಡಿಗೆ ಹೋದ ಇಬ್ಬರು ಯುವಕರು ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳವು ಮಾಡಿದ ಕುತೂಹಲಕರ ಘಟನೆ ಮೇ 22ರಂದು ನಡೆದಿದೆ.

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಡೈರೆಕ್ಟರ್‌ ಫಾ| ಯೋಹನನ್‌ ಕೆ ಜೆ ,ರವರ ದೂರಿನಂತೆ, ದಿನಾಂಕ 22.05.2024 ರಂದು ಸಂಜೆ, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿರುವ, ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ, ಇಬ್ಬರು ಯುವಕರು ಆಸ್ಪತ್ರೆಯ ಗೇಟಿನ ಮೂಲಕ ಒಳ ಬಂದು ಆಸ್ಪತ್ರೆಯ ಒಳ ಹೋಗಲು ಪ್ರಯತ್ನಿಸಿದ್ದು, ಈ ವೇಳೆ ಫಾ||ಟೋಮ್‌ ಎಂಬವರು ಅವರನ್ನು ಪ್ರಶ್ನಿಸಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಅದೇ ಯುವಕರು ಯಾರಿಗೂ ತಿಳಿಯದಂತೆ, ಆಸ್ಪತ್ರೆಯ ಹಿಂಭಾಗಕ್ಕೆ ಹೋಗಿ ಅಲ್ಲಿ ಇರಿಸಿದ್ದ ಏಣಿಯ ಮೂಲಕ ಒಂದನೇ ಮಹಡಿಗೆ ಹೋಗಿ ಸ್ಟೇರ್‌ ಕೇಸ್ ಮೂಲಕ ಕಂಪ್ಯೂಟರ್ ರೂಮಿಗೆ ಹೋಗಿ ಅಲ್ಲಿದ್ದ ಆಸ್ಪತ್ರೆಗೆ ಸಂಬಂಧಿಸಿದ ಎರಡು ಸೀಲ್ ಗಳನ್ನು ಕಳುವು ಮಾಡಿಕೊಂಡು ಹೋಗಿದ್ದು, 2 ಸೀಲ್ ಗಳ ಒಟ್ಟು ಮೌಲ್ಯ 600/- ರೂ ಆಗಬಹುದು, ಆರೋಪಿಗಳು ಆಸ್ಪತ್ರೆಯಿಂದ ಹೋಗುವಾಗ ಸಂಸ್ಥೆಯ ಸಿಬ್ಬಂದಿಗಳಿಗೆ ಕೊಲೆ ಬೆದರಿಕೆಯನ್ನು ಕೂಡ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 44/2024 ಕಲಂ:454,380,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!