July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಚರಣ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೆ.ಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಒಕ್ಕೂಟದ ನೂತನ ಅಧ್ಯಕ್ಷರಾದ ತ್ರೇಸ್ಯ ಎಂ.ವಿ ದೀಪ ಪ್ರಜ್ವಲಿಸಿ ಒಕ್ಕೂಟದ ಸಭೆಯನ್ನು ಉದ್ಘಾಟಿಸಿದರು..

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಭಾಗ್ಯಶ್ರಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀರವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ಸುಮಂತ್ ರವರು ಮಂಡಿಸಿದರು, ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಬಗ್ಗೆ ಮಾಹಿತಿಯನ್ನು ನೀಡಿದರು, ವಲಯ ಮೇಲ್ವಿಚಾರಕರಾದ ಹರೀಶ್ ರವರು ಹಾಗು ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯರವರು ಉಪಸ್ಥಿತರಿದ್ದರು. ಸುಮಂತ್ ರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!