25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!