23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya
error: Content is protected !!