July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya
error: Content is protected !!