September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಇಲಾಖೆ ತನ್ನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಉಲ್ಲೇಖ ಮಾಡಿದೆ. ಈ ವರ್ಷದಿಂದ ಸಿಬಿಎಸ್‌ಇ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯ ತನಕ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆ ನಡೆಸುವ ಪ್ರಸ್ತಾವನೆ ಚರ್ಚೆಯಲ್ಲಿರುವ ಕುರಿತು ವರದಿಯಾಗಿದೆ.

ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರು ಮಾಡಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್‌ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ತೆರೆದ ಪುಸ್ತಕ ಪರೀಕ್ಷೆ ಇದ್ದರೆ ಪುಸ್ತಕ ಓದುವುದನ್ನು ಮಾಡಬೇಕು. ನೋಟ್‌ಬುಕ್‌, ಪಠ್ಯ, ಸಂಬಂಧಿತ ರೆಫರೆನ್ಸ್‌ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಎಂಬುವುದರ ಜ್ಞಾನ ಇರಬೇಕು. ಇದು ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸುತ್ತದೆ.

ಈ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸಂಕಲನಾತ್ಮಕ ಮೌಲ್ಯಾಂಕನ ಅಥವಾ ರೂಪಣಾತ್ಮಕ ಮೌಲ್ಯಾಂಕನ ಇದರ ಭಾಗವಲ್ಲ. ಇದು ಶೈಕ್ಷಣಿಕ ಚಟುವಟಿಕೆಯ ಒಂದು ಭಾಗ ಎಂದು ಹೇಳಲಾಗಿದೆ.

Related posts

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya
error: Content is protected !!