25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ


ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ  ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31 ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.


ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ, ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ ಕಟ್ಟಡ ನವೀಕರಣಗೊಳಿಸಿರುವುದಕ್ಕೆ ಸಕ್ರಿಯ ಸಹಕಾರ ನೀಡಿದ ಎಲ್ಲರನ್ನೂ ಧನ್ಯತೆಯಿಂದ ಸ್ಮರಿಸಿದರು.


ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದಲ್ಲಿ ಕಲಿಯುವಿಕೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ವಿದ್ಯೆ ಮತ್ತು ಬೆಳಕು ಇತರರಿಗೆ ಕೊಟ್ಟಷ್ಟು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಶುಭ ಹಾರೈಸಿದರು.


ಶಾಲಾ ನವೀಕರಣ ಕಾರ್ಯದಲ್ಲಿ ಸಹಕರಿಸಿದ ರಜನೀಶ್, ಶಶಿ ಆಚಾರ್ ಬೆಳಾಲು, ಸುರೇಶ್, ಅಶೋಕ ನಾಯ್ಕ ಮತ್ತು ಮಧುಕರ ಅವರನ್ನು ಗೌರವಿಸಲಾಯಿತು.


ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಮತ್ತು ರಾಜೇಶ್ ಪೈ, ಪುಷ್ಪರಾಜ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್, ಎಂಜಿನಿಯರ್ ವಿದ್ಯಾಕುಮಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಆರತಿ ಉಪಸ್ಥಿತಿರಿದ್ದರು.
ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
error: Content is protected !!