23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಕಾಶಿಪಟ್ಣ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸುವುದರ ಮೂಲಕ ಉದ್ಘಾಟಿಸಲಾಯಿತು.

ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರವನ್ನು ಶಾಲಾ ಎಸ್‌ಡಿಎಂಸಿ ಸದಸ್ಯರು ವಿತರಿಸಿದರು. 2024-25ರ ಶೈಕ್ಷಣಿಕ ಬಲವರ್ಧನೆ ವರ್ಷದ ರೂಪುರೇಷೆಗಳನ್ನು ಪೋಷಕರಿಗೆ ತಿಳಿಯಪಡಿಸಿದರು.
ಶಾಲಾ ಶಿಕ್ಷಕ ದೇವುದಾಸ್ ನಾಯಕ್ ಶಾಲಾ ಶಿಸ್ತು, ಸಮವಸ್ತ್ರ ಮತ್ತು ಹತ್ತನೇ ತರಗತಿಯ ವಿಶೇಷ ತರಗತಿಗಳ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯಶಿಕ್ಷಕ ಶಶಿಧರ್ ಕೆ. ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ವಂದಿಸಿದರು. ಶಿಕ್ಷಕಿ ಶ್ರೀಮತಿ ಸೌಮ್ಯ ನಿರೂಪಿಸಿದರು.

Related posts

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya
error: Content is protected !!