22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

ಧರ್ಮಸ್ಥಳ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ, ವೃತ್ತಿಯಿಂದ ನಿವೃತ್ತರಾಗಲಿರುವ ಡಾ. ಎಲ್ ಎಚ್ ಮಂಜುನಾಥರವರನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಸನ್ಮಾನವನ್ನು ನೆರವೇರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥರು ಮಾತನಾಡುತ್ತಾ, ಡಾ. ಎಲ್ ಎಚ್ ಮಂಜುನಾಥರವರು ಓರ್ವ ಉತ್ತಮ ಓದುಗರೂ ಬರಹಗಾರರೂ ಆಗಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ, ಬೆಳ್ತಂಗಡಿ ತಾಲೂಕಿನಿಂದ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತಿ ಹೆಚ್ಚು ಆಜೀವ ಸದಸ್ಯರಾಗಿ ನೋಂದಣಿಯಾಗುವಲ್ಲಿ ಕಾರಣರಾದವರು. ಅಲ್ಲದೆ ತಾಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಗೆ ಮಾರ್ಗದರ್ಶನದೊಂದಿಗೆ ಸಹಕಾರ ನೀಡಿದವರು. ಇವರ ಸಾಮಾಜಿಕ ಮತ್ತು ಸಾಹಿತ್ಯಕ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ತಾಲೂಕಿನ ಅಧ್ಯಕ್ಷ ಡಿ. ಯದುಪತಿ ಗೌಡ, ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು, ಕೋಶಾಧ್ಯಕ್ಷ ಡಿ. ಧರ್ಣಪ್ಪ ಮತ್ತು ಉಜಿರೆ ಶ್ರೀ ಧ ಮ ಕಾಲೇಜಿನ ಉಪನ್ಯಾಸಕರಾದ ಡಾ. ಡಿ ಎ ನಾಗಣ್ಣರವರು ಉಪಸ್ಥಿತರಿದ್ದರು.

Related posts

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya
error: Content is protected !!