ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಶೇಡಿಮನೆ ಕೋರ್ಟ್ ರಸ್ತೆಯಲ್ಲಿರುವ ಜಗನ್ನಾಥ ಶೆಟ್ಟಿ ಅವರ 2 ಕಾಲು ಸ್ವಾಧೀನ ಕಳೆದುಕೊಂಡಿದ್ದು, ಅವರ ಪತ್ನಿ ಲಲಿತ ಎರಡು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿರುತ್ತಾರೆ. ಕುಟುಂಬವು ಆರ್ಥಿಕವಾಗಿ ದುರ್ಬಲರಾಗಿದ್ದು ಕುಟುಂಬದಲ್ಲಿ ದುಡಿಯುವ ಸದಸ್ಯರು ಯಾರು ಇಲ್ಲದೇ ಇದ್ದು ಯೋಜನೆಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ರೂ1000/- ದಂತೆ ಸಹಾಯಧನ ಮಂಜೂರು ಮಾಡಿದ್ದು, ಕುಟುಂಬಕ್ಕೆ ಮಂಜುರಾತ್ರಿ ಪತ್ರವನ್ನು ವಿಚಾರಿಸಲಾಯಿತು.


ಈ ಸಂದರ್ಭದಲ್ಲಿ ಕೇಂದ್ರ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ,ಕಣ್ಣಾಜೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಯಶೋಧ,
ಬೆಳ್ತಂಗಡಿ ಬಿ ಒಕ್ಕೂಟದ ಅಧ್ಯಕ್ಷರಾದ ಚರಣ್, ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Leave a Comment

error: Content is protected !!