April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!