July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya
error: Content is protected !!