September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya
error: Content is protected !!