ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು.

ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಾದ ಸರಕಾರಿ ಪ್ರಾಥಮಿಕ ಶಾಲೆ ಆರಂಬೋಡಿ, ಸರಕಾರಿ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ, ಸರಕಾರಿ ಪ್ರಾಥಮಿಕ ಶಾಲೆ ಕಡ್ತಲಬೆಟ್ಟು, ಸರಕಾರಿ ಪ್ರಾಥಮಿಕ ಶಾಲೆ ಮಂಚಕಲ್, ಸರಕಾರಿ ಪ್ರಾಥಮಿಕ ಶಾಲೆ ಪಿಲ್ಲಂ, ಸರಕಾರಿ ಪ್ರಾಥಮಿಕ ಶಾಲೆ ಹನ್ನೆರಡು ಕವಲು, ಸರಕಾರಿ ಪ್ರಾಥಮಿಕ ಶಾಲೆ ಗುಂಡೂರಿ, ಸರಕಾರಿ ಪ್ರಾಥಮಿಕ ಶಾಲೆ ರಾಯಿ, ಸರಕಾರಿ ಪ್ರಾಥಮಿಕ ಶಾಲೆ ಗುತ್ಯಡ್ಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ವೇಳೆ ಶ್ರೀ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಅವರ ಪರವಾಗಿ ಅವರ ತಂದೆ ಹರಿಯಪ್ಪ ಶೆಟ್ಟಿ ವಿತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳು ಜೊತೆಗಿದ್ದರು.

Leave a Comment

error: Content is protected !!