22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು.

ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಾದ ಸರಕಾರಿ ಪ್ರಾಥಮಿಕ ಶಾಲೆ ಆರಂಬೋಡಿ, ಸರಕಾರಿ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ, ಸರಕಾರಿ ಪ್ರಾಥಮಿಕ ಶಾಲೆ ಕಡ್ತಲಬೆಟ್ಟು, ಸರಕಾರಿ ಪ್ರಾಥಮಿಕ ಶಾಲೆ ಮಂಚಕಲ್, ಸರಕಾರಿ ಪ್ರಾಥಮಿಕ ಶಾಲೆ ಪಿಲ್ಲಂ, ಸರಕಾರಿ ಪ್ರಾಥಮಿಕ ಶಾಲೆ ಹನ್ನೆರಡು ಕವಲು, ಸರಕಾರಿ ಪ್ರಾಥಮಿಕ ಶಾಲೆ ಗುಂಡೂರಿ, ಸರಕಾರಿ ಪ್ರಾಥಮಿಕ ಶಾಲೆ ರಾಯಿ, ಸರಕಾರಿ ಪ್ರಾಥಮಿಕ ಶಾಲೆ ಗುತ್ಯಡ್ಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ವೇಳೆ ಶ್ರೀ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಅವರ ಪರವಾಗಿ ಅವರ ತಂದೆ ಹರಿಯಪ್ಪ ಶೆಟ್ಟಿ ವಿತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!