25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ


ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ  ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31 ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.


ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ, ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ ಕಟ್ಟಡ ನವೀಕರಣಗೊಳಿಸಿರುವುದಕ್ಕೆ ಸಕ್ರಿಯ ಸಹಕಾರ ನೀಡಿದ ಎಲ್ಲರನ್ನೂ ಧನ್ಯತೆಯಿಂದ ಸ್ಮರಿಸಿದರು.


ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದಲ್ಲಿ ಕಲಿಯುವಿಕೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ವಿದ್ಯೆ ಮತ್ತು ಬೆಳಕು ಇತರರಿಗೆ ಕೊಟ್ಟಷ್ಟು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಶುಭ ಹಾರೈಸಿದರು.


ಶಾಲಾ ನವೀಕರಣ ಕಾರ್ಯದಲ್ಲಿ ಸಹಕರಿಸಿದ ರಜನೀಶ್, ಶಶಿ ಆಚಾರ್ ಬೆಳಾಲು, ಸುರೇಶ್, ಅಶೋಕ ನಾಯ್ಕ ಮತ್ತು ಮಧುಕರ ಅವರನ್ನು ಗೌರವಿಸಲಾಯಿತು.


ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಮತ್ತು ರಾಜೇಶ್ ಪೈ, ಪುಷ್ಪರಾಜ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್, ಎಂಜಿನಿಯರ್ ವಿದ್ಯಾಕುಮಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಆರತಿ ಉಪಸ್ಥಿತಿರಿದ್ದರು.
ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya
error: Content is protected !!