23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ


ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ  ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31 ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.


ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ, ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ ಕಟ್ಟಡ ನವೀಕರಣಗೊಳಿಸಿರುವುದಕ್ಕೆ ಸಕ್ರಿಯ ಸಹಕಾರ ನೀಡಿದ ಎಲ್ಲರನ್ನೂ ಧನ್ಯತೆಯಿಂದ ಸ್ಮರಿಸಿದರು.


ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದಲ್ಲಿ ಕಲಿಯುವಿಕೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ವಿದ್ಯೆ ಮತ್ತು ಬೆಳಕು ಇತರರಿಗೆ ಕೊಟ್ಟಷ್ಟು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಶುಭ ಹಾರೈಸಿದರು.


ಶಾಲಾ ನವೀಕರಣ ಕಾರ್ಯದಲ್ಲಿ ಸಹಕರಿಸಿದ ರಜನೀಶ್, ಶಶಿ ಆಚಾರ್ ಬೆಳಾಲು, ಸುರೇಶ್, ಅಶೋಕ ನಾಯ್ಕ ಮತ್ತು ಮಧುಕರ ಅವರನ್ನು ಗೌರವಿಸಲಾಯಿತು.


ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಮತ್ತು ರಾಜೇಶ್ ಪೈ, ಪುಷ್ಪರಾಜ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್, ಎಂಜಿನಿಯರ್ ವಿದ್ಯಾಕುಮಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಆರತಿ ಉಪಸ್ಥಿತಿರಿದ್ದರು.
ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya
error: Content is protected !!