July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ


ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ  ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31 ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.


ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ, ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ ಕಟ್ಟಡ ನವೀಕರಣಗೊಳಿಸಿರುವುದಕ್ಕೆ ಸಕ್ರಿಯ ಸಹಕಾರ ನೀಡಿದ ಎಲ್ಲರನ್ನೂ ಧನ್ಯತೆಯಿಂದ ಸ್ಮರಿಸಿದರು.


ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದಲ್ಲಿ ಕಲಿಯುವಿಕೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.
ವಿದ್ಯೆ ಮತ್ತು ಬೆಳಕು ಇತರರಿಗೆ ಕೊಟ್ಟಷ್ಟು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಶುಭ ಹಾರೈಸಿದರು.


ಶಾಲಾ ನವೀಕರಣ ಕಾರ್ಯದಲ್ಲಿ ಸಹಕರಿಸಿದ ರಜನೀಶ್, ಶಶಿ ಆಚಾರ್ ಬೆಳಾಲು, ಸುರೇಶ್, ಅಶೋಕ ನಾಯ್ಕ ಮತ್ತು ಮಧುಕರ ಅವರನ್ನು ಗೌರವಿಸಲಾಯಿತು.


ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಮತ್ತು ರಾಜೇಶ್ ಪೈ, ಪುಷ್ಪರಾಜ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್, ಎಂಜಿನಿಯರ್ ವಿದ್ಯಾಕುಮಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಆರತಿ ಉಪಸ್ಥಿತಿರಿದ್ದರು.
ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!