23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

ಓಡಿಲ್ನಾಳ : ಸ. ಉ. ಪ್ರಾ. ಶಾಲೆ ಓಡಿಲ್ನಾಳ. 2024-25 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೆ31 ರಂದು ಅದ್ದೂರಿಯಾಗಿ ನೆರವೇರಿತು.

ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಎಸ್ ಡಿ ಎಮ್ ಸಿ ಉಪಾಧ್ಯಕ್ಷರಾದ ಶಮೀಮಾ ಇವರ ದಿವ್ಯ ಉಪಸ್ಥಿತಿಯಲ್ಲಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಆರತಿ ಬೆಳಗಿ, ಪುಷ್ಪಾಚನೆ ಗೈದು ಬ್ಯಾಂಡ್ ವಾದ್ಯಗಳೊಂದಿಗೆ ಬರಮಾಡಿಕೊಳ್ಳಲಾಯಿತು.

ದೀಪ ಬೆಳಗಿಸಿ ಉದ್ಘಾಟಿಸಿದ ಎಸ್ ಡಿ ಎಮ್ ಸಿ ಅಧ್ಯಕ್ಷರು ಎಲ್ಲಾ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿ ನೀಡಿದರು. ಶೈಕ್ಷಣಿಕ ವರ್ಷದ ಕಲಿಕಾ ಚಟುವಟಿಕೆಗಳಿಗೆ ಶುಭ ಹಾರೈಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಆನಂದಿ, ಎಸ್‌. ಡಿ ಎಂಸಿ ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ ಹಾಗೂ ಅಧ್ಯಾಪಕ ವೃಂದ, ಪೋಷಕರು, ಹಳೆ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು.

ದೈಹಿಕ ಶಿಕ್ಷಕರಾದ ನಿರಂಜನ್ ಕಾರ್ಯಕ್ರಮ ನಿರೂಪಿಸಿದರು ವಿಲ್ಮೆಂಟ್ ಸೆರಾವೋ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ ಸ್ವಾಗತಿಸಿ ಶಿಕ್ಷಕಿ ಶಾರದಾ ಮಣಿ ಧನ್ಯವಾದವಿತ್ತರು.

Related posts

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya
error: Content is protected !!