23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya
error: Content is protected !!