25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಗ್ರಾಮಸ್ಥರಾದ ಮುತ್ತಯ್ಯ ಪೂಜಾರಿ ದಂಪತಿಗಳ ೬೦ನೇ ವರ್ಷದ ವೈವಾಹಿಕ ಜೀವನದ ಸವಿನೆನಪಿಗಾಗಿ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಸಮವಸ್ತ್ರವನ್ನು ವಿತರಿಸಿದ ಶಾಲಾ ಹಳೆ ವಿದ್ಯಾರ್ಥಿ ಶಿವರಾಜ್ ಸನ್ಮಾನಿಸಲಾಯಿತು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಈ ವರ್ಷದ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮಕ್ಕಳನ್ನು ಮರಳಿ ಶಾಲೆಗೆ ಬರುವಂತೆ ಮನವೊಲಿಸಲು ಪೋಷಕರಿಗೆ ವಿನಂತಿಸಿದರು. ಶಾಲೆಯ ಶೈಕ್ಷಣಿಕ ಪ್ರಗತಿಗೆ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ವೇತ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಜಗದೀಶ್, ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಪೋಷಕರು ಭಾಗವಹಿಸಿದ್ದರು.

ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಸ್ವಾಗತಿಸಿದರು. ಈ ವರ್ಷದ ಶಿಕ್ಷಣ ಕಾರ್ಯಕ್ರಮಗಳ ಬಗ್ಗೆ ಅಧ್ಯಾಪಕಿ ರೂಪ ವಿವರಿಸಿದರು. ಶಿಕ್ಷಕ ರಾಜ ವಂದಿಸಿದರು.

Related posts

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!