September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

ಪುಂಜಾಲಕಟ್ಟೆ: ಶಾಲೆಯು ಜಿಲ್ಲೆಯಲ್ಲಿ ಮಾದರಿಯ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿದ್ದು ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಈ ಸಂಸ್ಥೆಯ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಕಾರಣೀಭೂತರಾದ ಸಂಸ್ಥೆಯ ಶಿಕ್ಷಕ ಬಳಗಕ್ಕೆ ವಿಶೇಷ ಕೃತಜ್ಞತೆಗಳು. ತಮ್ಮ ಈ ರೀತಿಯ ಕಾರ್ಯ ಸದಾ ಮುಂದುವರಿಯಲಿ. ನಮ್ಮ ಸಹಕಾರ ಸದಾ ನಿಮ್ಮೊಂದಿಗಿದೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯ ಪದ್ಮನಾಭರವರು ಹೇಳಿದರು.


ಅವರು ಪುಂಜಾಲಕಟ್ಟೆ ಕೆಪಿಎಸ್ ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಈ ಮಾತುಗಳಾಡಿದರು.


ಸಭಾ ಕಾರ್ಯಕ್ರಮದ ಪೂರ್ವಭಾವಿಯಾಗಿ 9ನೇ ತರಗತಿಗೆ ಸೇರ್ಪಡೆಗೊಳ್ಳುತ್ತಿರುವ ಎಲ್ಲ 155 ವಿದ್ಯಾರ್ಥಿಗಳಿಗೆ ಪ್ರಸ್ತುತ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ನನ್ನ ಮಗು- ನನ್ನ ಗಿಡ ಎಂಬ ಧ್ಯೇಯದೊಂದಿಗೆ ಸಸಿಗಳನ್ನು ನೀಡುವ ಪೂರ್ವಭಾವಿಯಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ದಿವಾಕರ್ ಶೆಟ್ಟಿ ಅವರು ಗಿಡ ಹಸ್ತಾಂತರ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳನ್ನು ಶಾಲೆಗೆ ಬ್ಯಾಂಡ್ ವಾದನದೊಂದಿಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಶಾಲಾ ಮೈದಾನದಲ್ಲಿ ನೂತನ ರೀತಿಯಲ್ಲಿ ಗಿಡಗಳನ್ನು ಪ್ರದರ್ಶಿಸಿ ಪಥ ಸಂಚಲನವನ್ನು ನಡೆಸಿದರು. ಗಿಡವನ್ನು ಸ್ವೀಕರಿಸಿರುವ 9ನೇ ತರಗತಿಯ ವಿದ್ಯಾರ್ಥಿಗಳು ಈ ಗಿಡವನ್ನು ತಮ್ಮ ತಮ್ಮ ಮನೆಯಲ್ಲಿ ನೆಟ್ಟು ಪೋಷಿಸಿ ಬೆಳೆಸುತ್ತೇವೆ ಎನ್ನುವ ಮನ ಪ್ರತಿಜ್ಞೆಯನ್ನು ಮಾಡಿದರು.


ಈ ವರ್ಷದ ಪುಂಜಾಲಕಟ್ಟೆ ಶಾಲೆಯ ಧ್ಯೇಯ ವಾಕ್ಯ ನಮ್ಮ ನಡೆ- ಮೌಲ್ಯಾಧಾರಿತ ಶಿಕ್ಷಣದ ಕಡೆ ಎಂದು ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಘೋಷಿಸಿದರು.
ಸಭಾಧ್ಯಕ್ಷತೆಯನ್ನು ಉದಯಕುಮಾರ್ ಬಿ ವಹಿಸಿಕೊಂಡು ಸಭೆಯನ್ನು ಮುನ್ನಡೆಸಿ ಸಂದರ್ಭೋಚಿತವಾಗಿ ಮಕ್ಕಳಿಗೆ ಹಾಗೂ ಪೋಷಕರಿಗೆ ಕಿವಿ ಮಾತನ್ನು ಹೇಳಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯರವರು ಸಮಯೋಚಿತವಾಗಿ ಪ್ರೋತ್ಸಾಹದ ಮಾತುಗಳೊಂದಿಗೆ ಕಾರ್ಯಕ್ರಮಕ್ಕೆ ಕಳೆಯನ್ನು ತಂದು ಕೊಟ್ಟರು. ಇದೇ ಸಂದರ್ಭದಲ್ಲಿ ಇಲಾಖೆಯಿಂದ ನೀಡಲಾದ ಸಮವಸ್ತ್ರ, ಪಠ್ಯಪುಸ್ತಕ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಶಾಲಾ ಶಿಕ್ಷಕರು ಪ್ರಾರ್ಥಿಸಿ, ವಿಜ್ಞಾನ ಶಿಕ್ಷಕ ನಿರಂಜನ್ ಜೈನ್ ಐ ಸ್ವಾಗತಿಸಿ, ಆಂಗ್ಲ ಭಾಷೆ ಶಿಕ್ಷಕ ಹರಿಪ್ರಸಾದ್ ಆರ್ ಧನ್ಯವಾದವಿತ್ತರು , ಸಮಾಜ ವಿಜ್ಞಾನ ಶಿಕ್ಷಕ ಧರಣೇಂದ್ರ ಕೆ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥರಾದ ಸುರೇಶ್ ಶೆಟ್ಟಿ ಹಾಗೂ ಅಧ್ಯಾಪಕ ಬಳಗ, ಶಾಲಾ ಅಭಿವೃದ್ಧಿ ಸಮಿತಿಯ ಕ್ರಿಯಾಶೀಲ ಸದಸ್ಯರಾದ ದಿವಾಕರ್ ಶೆಟ್ಟಿ ಹಾಗೂ ಪೋಷಕ ಬಂಧುಗಳು ಸರ್ವ ರೀತಿಯ ಸಹಕಾರ ನೀಡಿದರು.

Related posts

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya
error: Content is protected !!