April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇದರ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮವು ಜೂ.10ರಂದು ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಲಿದೆ.


ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗದ ಸಂಘ ಚಾಲಕ ಡಾ|| ನಾರಾಯಣ ಶೆಣೈ ಮತ್ತು ಮಂಗಳೂರು ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಚಾರ್ಟರ್ಡ್ ಅಕೌಂಟೆಂಟ್ ಕಾರ್ಕಳ ಕಮಲಾಕ್ಷ ಕಾಮತ್, ಬಜಗೋಳಿ ರಾಜ್ಯ ಕೃಷರ್ ಮಾಲಿಕರ ಸಂಘದ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.

Related posts

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya
error: Content is protected !!