25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇದರ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮವು ಜೂ.10ರಂದು ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಲಿದೆ.


ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗದ ಸಂಘ ಚಾಲಕ ಡಾ|| ನಾರಾಯಣ ಶೆಣೈ ಮತ್ತು ಮಂಗಳೂರು ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಚಾರ್ಟರ್ಡ್ ಅಕೌಂಟೆಂಟ್ ಕಾರ್ಕಳ ಕಮಲಾಕ್ಷ ಕಾಮತ್, ಬಜಗೋಳಿ ರಾಜ್ಯ ಕೃಷರ್ ಮಾಲಿಕರ ಸಂಘದ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.

Related posts

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya
error: Content is protected !!