23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

ಧರ್ಮಸ್ಥಳ :ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದಲ್ಲಿ ಮೇ 31ರಂದು ಶಾಲಾ ಆರಂಭೋತ್ಸವ ಕಾರ್ಯಕ್ರಮ ಜರಗಿತು.

ಉದ್ಘಾಟಕರಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ ಬಾಲಕೃಷ್ಣ ಪೂಜಾರಿಯವರು ದೀಪ ಪ್ರಜ್ವಲನಗೊಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

” ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಕೇವಲ ಅಂಕಗಳ ಮಾನದಂಡವನ್ನು ಮಾತ್ರ ಪರಿಗಣಿಸದೆ ವಿದ್ಯಾರ್ಥಿಗಳು ಮೈಗೂಡಿಸಿಕೊಂಡಂತಹ ಸಂಸ್ಕಾರಯುತ ಮೌಲ್ಯಗಳನ್ನು ಕೂಡ ಪರಿಗಣಿಸಿ ಅಂತಹ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮಗಳು ನಡೆಯಬೇಕು” ಮೌಲ್ಯಾಧಾರಿತ ಶಿಕ್ಷಣದ ಮೂಲಕ ಮಾತ್ರ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ ಎಂಬ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಾಲಾ ಮುಖ್ಯೋಪಾಧ್ಯಾಯರಾದ ಎನ್ ಪದ್ಮರಾಜು ಅವರು ಅಧ್ಯಕ್ಷೀಯ ನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಚಿತವಾಗಿ ವಿತರಿಸಿದ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಅತಿಥಿಗಳು ವಿತರಿಸಿದರು. ಕನ್ನಡ ಶಿಕ್ಷಕರಾದ ಯುವರಾಜರವರು ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ನಿರೂಪಿಸಿ, ಶಿಕ್ಷಕಿ ಶ್ರೀಮತಿ ದಿವ್ಯ ಧನ್ಯವಾದವಿತ್ತರು.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!