22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.


ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.

ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya
error: Content is protected !!