23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.


ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.

ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.

Related posts

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya
error: Content is protected !!