23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.


ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.

ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.

Related posts

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya
error: Content is protected !!