ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಮಚ್ಚಿನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಿಸಲಾಯಿತು.

ಯೂನಿಯನ್ ಬ್ಯಾಂಕ್ ನ ಮಹತ್ವಾಕಾಂಕ್ಷಿ ಯೋಜನೆಯ ಅಂಗವಾಗಿ ಎಲ್ಲಾ ಧಾರ್ಮಿಕ ಮಂದಿರಗಳಿಗೆ ಈ ಸವಲತ್ತು ನೀಡಿ ಭಕ್ತಾದಿಗಳಿಗೆ ದೇಣಿಗೆ ನೀಡಲು ಸುಲಭವಾಗಲು ಕ್ಯೂಆರ್ ಕೋಡ್ ಸೌಲಭ್ಯವನ್ನು ನೀಡಲಾಗುತ್ತಿದೆ.


ದೇವಸ್ಥಾನದ ಪರವಾಗಿ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಈ ಹುಂಡಿಯನ್ನ ಬ್ಯಾಂಕಿನ ಮುಖ್ಯ ಪ್ರಬಂಧಕರಾದ ವೆಂಕಟೇಶ್ ರವರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಅಶೋಕ್ ಕೋಟ್ಯಾನ್, ಬ್ಯಾಂಕಿನ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Leave a Comment

error: Content is protected !!