24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
error: Content is protected !!