September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!