25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಕೊಯ್ಯೂರು ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾ ಕೊಕ್ಕಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಎಂಬ ಆಯುಧದಿಂದ ನಾವು ಜಗತ್ತನ್ನು ಗೆಲ್ಲಬಹುದು. ಇವತ್ತು ಜ್ಞಾನ ಎಂದರೆ ಅಂಕಗಳು ಎಂಬಂತೆ ಕಂಡು ಬರುತ್ತದೆ. ಆದರೆ ಅಂಕಗಳಿಂದ ಅಳತೆ ಮಾಡಲಾಗದ ಎಷ್ಟೋ ಜ್ಞಾನಗಳು ಇಂದು ನಮಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳು ಹಳ್ಳಿಜೀವನಕ್ರಮದಲ್ಲಿ ಕಂಡು ಬರುವ ಜ್ಞಾನವನ್ನು ಹೆಚ್ಚಾಗಿ ಪಡೆದುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಆರೋಗ್ಯವಂತ ಸತ್ಪ್ರಜೆಗಳಾಗಬೇಕು ಎಂದರು.

ಈ ಸಂದರ್ಭದಲ್ಲಿ ರಾಮಚಂದ್ರ ದೊಡಮನಿ, ಮೋಹನದಾಸ, ಪ್ರವೀಣ ಕುಮಾರ್ ಹೆಚ್, ಗೀತಾ, ಸುಧಾಕರ ಶೆಟ್ಟಿ ಮತ್ತು ವಿದ್ಯಾರ್ಥಿ ಪಾಲಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಪ್ರಸ್ತಾಪನೆಯೊಂದಿಗೆ ಸ್ವಾಗತಿಸಿದರು. ಬೇಬಿ ಕಾರ್ಯಕ್ರಮ ನಿರೂಪಿಸಿದರು. ದೀಪ್ತಿ ಹೆಗ್ಡೆ ವಂದಿಸಿದರು.

ಉಚಿತ ಸಮವಸ್ತ್ರ, ಪುಸ್ತಕ ವಿತರಿಸಲಾಯಿತು. ಬಳಿಕ ಸಿಹಿಯೂಟ ನೀಡಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!