25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಕೊಯ್ಯೂರು ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾ ಕೊಕ್ಕಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಎಂಬ ಆಯುಧದಿಂದ ನಾವು ಜಗತ್ತನ್ನು ಗೆಲ್ಲಬಹುದು. ಇವತ್ತು ಜ್ಞಾನ ಎಂದರೆ ಅಂಕಗಳು ಎಂಬಂತೆ ಕಂಡು ಬರುತ್ತದೆ. ಆದರೆ ಅಂಕಗಳಿಂದ ಅಳತೆ ಮಾಡಲಾಗದ ಎಷ್ಟೋ ಜ್ಞಾನಗಳು ಇಂದು ನಮಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳು ಹಳ್ಳಿಜೀವನಕ್ರಮದಲ್ಲಿ ಕಂಡು ಬರುವ ಜ್ಞಾನವನ್ನು ಹೆಚ್ಚಾಗಿ ಪಡೆದುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಆರೋಗ್ಯವಂತ ಸತ್ಪ್ರಜೆಗಳಾಗಬೇಕು ಎಂದರು.

ಈ ಸಂದರ್ಭದಲ್ಲಿ ರಾಮಚಂದ್ರ ದೊಡಮನಿ, ಮೋಹನದಾಸ, ಪ್ರವೀಣ ಕುಮಾರ್ ಹೆಚ್, ಗೀತಾ, ಸುಧಾಕರ ಶೆಟ್ಟಿ ಮತ್ತು ವಿದ್ಯಾರ್ಥಿ ಪಾಲಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಪ್ರಸ್ತಾಪನೆಯೊಂದಿಗೆ ಸ್ವಾಗತಿಸಿದರು. ಬೇಬಿ ಕಾರ್ಯಕ್ರಮ ನಿರೂಪಿಸಿದರು. ದೀಪ್ತಿ ಹೆಗ್ಡೆ ವಂದಿಸಿದರು.

ಉಚಿತ ಸಮವಸ್ತ್ರ, ಪುಸ್ತಕ ವಿತರಿಸಲಾಯಿತು. ಬಳಿಕ ಸಿಹಿಯೂಟ ನೀಡಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.

Related posts

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!