22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಕೊಯ್ಯೂರು ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾ ಕೊಕ್ಕಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಎಂಬ ಆಯುಧದಿಂದ ನಾವು ಜಗತ್ತನ್ನು ಗೆಲ್ಲಬಹುದು. ಇವತ್ತು ಜ್ಞಾನ ಎಂದರೆ ಅಂಕಗಳು ಎಂಬಂತೆ ಕಂಡು ಬರುತ್ತದೆ. ಆದರೆ ಅಂಕಗಳಿಂದ ಅಳತೆ ಮಾಡಲಾಗದ ಎಷ್ಟೋ ಜ್ಞಾನಗಳು ಇಂದು ನಮಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳು ಹಳ್ಳಿಜೀವನಕ್ರಮದಲ್ಲಿ ಕಂಡು ಬರುವ ಜ್ಞಾನವನ್ನು ಹೆಚ್ಚಾಗಿ ಪಡೆದುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಆರೋಗ್ಯವಂತ ಸತ್ಪ್ರಜೆಗಳಾಗಬೇಕು ಎಂದರು.

ಈ ಸಂದರ್ಭದಲ್ಲಿ ರಾಮಚಂದ್ರ ದೊಡಮನಿ, ಮೋಹನದಾಸ, ಪ್ರವೀಣ ಕುಮಾರ್ ಹೆಚ್, ಗೀತಾ, ಸುಧಾಕರ ಶೆಟ್ಟಿ ಮತ್ತು ವಿದ್ಯಾರ್ಥಿ ಪಾಲಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಪ್ರಸ್ತಾಪನೆಯೊಂದಿಗೆ ಸ್ವಾಗತಿಸಿದರು. ಬೇಬಿ ಕಾರ್ಯಕ್ರಮ ನಿರೂಪಿಸಿದರು. ದೀಪ್ತಿ ಹೆಗ್ಡೆ ವಂದಿಸಿದರು.

ಉಚಿತ ಸಮವಸ್ತ್ರ, ಪುಸ್ತಕ ವಿತರಿಸಲಾಯಿತು. ಬಳಿಕ ಸಿಹಿಯೂಟ ನೀಡಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.

Related posts

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!