September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಗಳು ಹಾಗೂ ಈ ಕ್ಷೇತ್ರದ ಧರ್ಮೋಥಾನಾ ಟ್ರಸ್ಟ್ ನ ಕಾರ್ಯದರ್ಶಿಗಳಾದ ವೀರು ಶೆಟ್ಟಿ ಅವರ ಆಗಮಿಸಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಟಿಕೆ ಸಾಮಾನುಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡರು. ನಂತರ ಶಾಲಾ ಪ್ರಾರಂಭೋತ್ಸವವನ್ನು ದಿವ್ಯ ಹಸ್ತದಿಂದ ದೀಪ ಪ್ರಜ್ವಲನ ಮಾಡುವುದರ ಮೂಲಕ ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡುವುದರ ಮೂಲಕ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಈ ವರ್ಷ ಎಲ್ಲ ವಿದ್ಯಾರ್ಥಿಗಳು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಕಲಿತು ಶಾಲೆಗೆ ಒಳ್ಳೆಯ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠ ಪ್ರವಚನಗಳನ್ನು ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಪುನರಾವರ್ತನೆಗೊಳಿಸಿದಾಗ ಮಗುವಿನ ಕಲಿಕಾ ಮಟ್ಟ ಇನ್ನಷ್ಟು ಹೆಚ್ಚಾಗಲು ಸಾಧ್ಯವಿದೆ. ಪೂಜ್ಯ ಖಾವಂದರು ಈ ಶಾಲೆಗೆ ಬೇಕಾದ ಎಲ್ಲಾ ಮೂಲಭೂತ ಸವಲತ್ತು ಗಳನ್ನು ಒದಗಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ,ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಗೆ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ವಿದ್ಯಾರ್ಥಿಗಳೆಲ್ಲರೂ ಕೂಡ ಆಟ ಪಾಠಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತರುವಂತಹ ವಿದ್ಯಾರ್ಥಿಗಳಾಗಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ನಿವೃತ್ತ ಮುಖ್ಯ ಶಿಕ್ಷಕ ಜಿ. ಶ್ರೀಧರನ್ ನಾಯರ್ ಅವರು ಶಾಲೆಯ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಶುಭ ಹಾರೈಸಿದರು.


ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲೆಯ ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.


ವೀರು ಶೆಟ್ಟಿ ರವರ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿಯನ್ನು ನೀಡಿದರು. ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ರವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು ಸಹಕರಿಸಿದರು.

Related posts

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!