22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಪ್ರಯತ್ನವನ್ನು ವೈಜ್ಞಾನಿಕವಾಗಿ ಮುಂದುವರಿಸುವ ಸಲುವಾಗಿ ಹೆತ್ತವರ ನಿರೀಕ್ಷೆ, ಭಾವನೆ, ಭರವಸೆಗಳನ್ನು ಈಡೇರಿಸುವ ಉದ್ದೇಶದಿಂದ ಈ ಸಂಸ್ಥೆ ಬಹಳಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ ಅಲ್ಲದೇ ನಿರೀಕ್ಷೆಗೂ ಮೀರಿದ ಫಲಿತಾಂಶವನ್ನು ಕೂಡ ಕಂಡಿದೆ. ವಸತಿ ಪದವಿ ಪೂರ್ವ ಕಾಲೇಜು ‘ಮಿನಿ ಕರ್ನಾಟಕ’ ಇದ್ದ ಹಾಗೆ ರಾಜ್ಯದ ಹಲವಾರು ಜಿಲ್ಲೆಗಳ ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ನಿರತರಾಗಿದ್ದಾರೆ. ಸ್ವಾಮಿ ಮಂಜುನಾಥನ ಕೃಪೆ, ಸಂಸ್ಥೆಯ ನಿರಂತರ ಪ್ರೋತ್ಸಾಹ, ನುರಿತ ಅಧ್ಯಾಪಕ ವರ್ಗದ ಮಾರ್ಗದರ್ಶನದಲ್ಲಿ ಉತ್ತಮ ಫಲಿತಾಂಶ ದೊರೆತಿದ್ದು, ಮುಂದಿನ ದಿನಗಳಲ್ಲಿ ಹೆತ್ತವರು ನಿಮ್ಮ ಮಕ್ಕಳ ಇನ್ನೂ ಉತ್ತಮ ಫಲಿತಾಂಶವನ್ನು ಕಾಣಲಿದ್ದೀರಿ. ಈ ದಿನ ಹೆತ್ತವರಾದ ನಿಮ್ಮ ಮುಖದಲ್ಲಿ ಕಾಣುತ್ತಿರುವ ಭಯ ,ಆತಂಕ , ತಳಮಳ ಮುಂದಿನ ದಿನಗಳಲ್ಲಿ ಸಂತೃಪ್ತಿಯ ನಗೆಯ ಮೂಲಕ ಮಾಯವಾಗಲಿದೆ.


ಹೆತ್ತವರಾದ ನಿಮ್ಮ ನಿರೀಕ್ಷೆಗಳು ಮಿತಿಯಲ್ಲಿ ಇರಲಿ, ತಪೋಭೂಮಿಯಂತಿರುವ ಈ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಗುಣಾತ್ಮಕ ಹಾಗೂ ಮೌಲಿಕ ಬದಲಾವಣೆಗೆ ಸತತ ಪರಿಶ್ರಮವು ನಡೆಯುತ್ತಿದ್ದು, ಮಕ್ಕಳಿಗೆ ಕಲಿಕೆಗೆ ಅತಿಯಾದ ಒತ್ತಡವನ್ನು ಹೇರದೆ ಸವಾಲುಗಳನ್ನು ಎದುರಿಸಲು ಅವರನ್ನು ಸಜ್ಜುಗೊಳಿಸಲಾಗುತ್ತಿದೆ. ಓದುವ , ಓದಿ ಗುರಿ ಮುಟ್ಟುವ ಹಸಿವನ್ನ ವಿದ್ಯಾರ್ಥಿಗಳಲ್ಲಿ ಒಡ ಮೂಡಿಸುವುದು ಆ ಮೂಲಕ ಸಾಧಿಸುವ ಛಲವನ್ನು ತುಂಬಿಸುವುದು ಬಹಳ ಮುಖ್ಯ.ನಮ್ಮ ದೇಹದ ನರವ್ಯೂಹವನ್ನು ದುರ್ಬಲ ಗೊಳಿಸುವಂತಹ ಚಿಂತೆಯಿಂದ ದೂರವಿದ್ದು ಕೇವಲ ಆರೋಗ್ಯಪೂರ್ಣ ಮೌಲಿಕ ಶಿಕ್ಷಣವು ಇಂದಿನ ದಿನಗಳಲ್ಲಿ ಅನಿವಾರ್ಯವೆನಿಸಿದೆ. ಹೆತ್ತವರ ನಿರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸಿ ಉತ್ತಮ ಕಲಿಕಾರ್ಥಿಯಾಗಿ ಉತ್ತಮ ಅಂಕದ ಜೊತೆಗೆ ನಿಮ್ಮ ವ್ಯಕ್ತಿತ್ವದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿಸಿಕೊಳ್ಳಿ. ಎಂದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ.ಕುಮಾರ್ ಹೆಗ್ಡೆ ಬಿ.ಎ. ದೀಪ ಪ್ರಜ್ವಲನೆಯ ಮೂಲಕ ಮಾತನಾಡಿ , ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅತ್ಯಂತ ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳಿ, ಕಾಲೇಜಿನ ತಂಡ ನಿಮ್ಮ ಸಹಾಯಕ್ಕೆ ಸಜ್ಜಾಗಿದ್ದೇವೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್, ದೈಹಿಕ ಶಿಕ್ಷಕರಾದ ಲಕ್ಷ್ಮಣ್ ಜಿ.ಡಿ. ಉಪಸ್ಥಿತರಿದ್ದರು.
ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ ಪಿ. ವಂದಿಸಿ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!