30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ಸಲುವಾಗಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ವಿಭಾಗದ ಸರಕಾರಿ/ ಅನುದಾನಿತ/ಅನುದಾನ ರಹಿತ ಉಪನ್ಯಾಸಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಮೇ 30 ರಂದು ಕೆನರಾ ಪದವಿ ಕಾಲೇಜು, ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆಯಿತು.

ಅತಿಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಕಾರ್ಯಕ್ರಮವನ್ನು ಉದ್ದೇಶಿಸಿ ರಜೆಯಲ್ಲಿಯೂ ತಮ್ಮ ಸಮಯವನ್ನು ಬಿಡುವುಗೊಳಿಸಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿ ಜಿಲ್ಲೆಯ ದ್ವಿತೀಯ ಪಿಯುಸಿಯ ಫಲಿತಾಂಶ ಉನ್ನತ ಮಟ್ಟಕ್ಕೆ ಏರಿಕೆಗೆ ಇವರೆ ಕಾರಣ ಎಂದರು.

ಮಂಗಳೂರು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣರವರು ಇಂಥ ಕಾರ್ಯಗಾರದಿಂದ ಉಪನ್ಯಾಸಕರು ತಮ್ಮ ವಿಷಯದ ಬಗ್ಗೆ ಸಂಪೂರ್ಣ ಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾಮಹೇಶ್ವರಿ, ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಸಂಪನ್ಮೂಲ ವ್ಯಕ್ತಿಯಾಗಿ ಗಿರೀಶ್ ಕೆ ಕೆನರಾ ಪದವಿ ಕಾಲೇಜು, ಮಂಗಳೂರು ಉಪಸ್ಥಿತರಿದ್ದು ಕಾರ್ಯಗಾರದ ಪ್ರಾಮುಖ್ಯತೆಯನ್ನು ತಿಳಿಸಿ ಕಾರ್ಯಗಾರಕ್ಕೆ ಶುಭ ಹಾರೈಸಿದರು.

ತರಬೇತಿ ಕಾರ್ಯಾಗಾರದಲ್ಲಿ ಎಲ್ಲಾ ಗಣಕವಿಜ್ಞಾನ ಉಪನ್ಯಾಸಕರು ಭಾಗವಹಿಸಿದ್ದರು. ಸಂಘದ ವತಿಯಿಂದ ಅತಿಥಿಗಳಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು.

ಪ್ರದೀಪ್ ಕೆ ವೈ ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಸುಮಾ ಶೆಟ್ಟಿ ವಂದಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!