July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ಸಲುವಾಗಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ವಿಭಾಗದ ಸರಕಾರಿ/ ಅನುದಾನಿತ/ಅನುದಾನ ರಹಿತ ಉಪನ್ಯಾಸಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಮೇ 30 ರಂದು ಕೆನರಾ ಪದವಿ ಕಾಲೇಜು, ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆಯಿತು.

ಅತಿಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಕಾರ್ಯಕ್ರಮವನ್ನು ಉದ್ದೇಶಿಸಿ ರಜೆಯಲ್ಲಿಯೂ ತಮ್ಮ ಸಮಯವನ್ನು ಬಿಡುವುಗೊಳಿಸಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿ ಜಿಲ್ಲೆಯ ದ್ವಿತೀಯ ಪಿಯುಸಿಯ ಫಲಿತಾಂಶ ಉನ್ನತ ಮಟ್ಟಕ್ಕೆ ಏರಿಕೆಗೆ ಇವರೆ ಕಾರಣ ಎಂದರು.

ಮಂಗಳೂರು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣರವರು ಇಂಥ ಕಾರ್ಯಗಾರದಿಂದ ಉಪನ್ಯಾಸಕರು ತಮ್ಮ ವಿಷಯದ ಬಗ್ಗೆ ಸಂಪೂರ್ಣ ಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾಮಹೇಶ್ವರಿ, ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಸಂಪನ್ಮೂಲ ವ್ಯಕ್ತಿಯಾಗಿ ಗಿರೀಶ್ ಕೆ ಕೆನರಾ ಪದವಿ ಕಾಲೇಜು, ಮಂಗಳೂರು ಉಪಸ್ಥಿತರಿದ್ದು ಕಾರ್ಯಗಾರದ ಪ್ರಾಮುಖ್ಯತೆಯನ್ನು ತಿಳಿಸಿ ಕಾರ್ಯಗಾರಕ್ಕೆ ಶುಭ ಹಾರೈಸಿದರು.

ತರಬೇತಿ ಕಾರ್ಯಾಗಾರದಲ್ಲಿ ಎಲ್ಲಾ ಗಣಕವಿಜ್ಞಾನ ಉಪನ್ಯಾಸಕರು ಭಾಗವಹಿಸಿದ್ದರು. ಸಂಘದ ವತಿಯಿಂದ ಅತಿಥಿಗಳಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು.

ಪ್ರದೀಪ್ ಕೆ ವೈ ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಸುಮಾ ಶೆಟ್ಟಿ ವಂದಿಸಿದರು.

Related posts

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!