23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ಸಲುವಾಗಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ವಿಭಾಗದ ಸರಕಾರಿ/ ಅನುದಾನಿತ/ಅನುದಾನ ರಹಿತ ಉಪನ್ಯಾಸಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಮೇ 30 ರಂದು ಕೆನರಾ ಪದವಿ ಕಾಲೇಜು, ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆಯಿತು.

ಅತಿಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಕಾರ್ಯಕ್ರಮವನ್ನು ಉದ್ದೇಶಿಸಿ ರಜೆಯಲ್ಲಿಯೂ ತಮ್ಮ ಸಮಯವನ್ನು ಬಿಡುವುಗೊಳಿಸಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿ ಜಿಲ್ಲೆಯ ದ್ವಿತೀಯ ಪಿಯುಸಿಯ ಫಲಿತಾಂಶ ಉನ್ನತ ಮಟ್ಟಕ್ಕೆ ಏರಿಕೆಗೆ ಇವರೆ ಕಾರಣ ಎಂದರು.

ಮಂಗಳೂರು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣರವರು ಇಂಥ ಕಾರ್ಯಗಾರದಿಂದ ಉಪನ್ಯಾಸಕರು ತಮ್ಮ ವಿಷಯದ ಬಗ್ಗೆ ಸಂಪೂರ್ಣ ಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾಮಹೇಶ್ವರಿ, ಮಂಗಳೂರು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಸಂಪನ್ಮೂಲ ವ್ಯಕ್ತಿಯಾಗಿ ಗಿರೀಶ್ ಕೆ ಕೆನರಾ ಪದವಿ ಕಾಲೇಜು, ಮಂಗಳೂರು ಉಪಸ್ಥಿತರಿದ್ದು ಕಾರ್ಯಗಾರದ ಪ್ರಾಮುಖ್ಯತೆಯನ್ನು ತಿಳಿಸಿ ಕಾರ್ಯಗಾರಕ್ಕೆ ಶುಭ ಹಾರೈಸಿದರು.

ತರಬೇತಿ ಕಾರ್ಯಾಗಾರದಲ್ಲಿ ಎಲ್ಲಾ ಗಣಕವಿಜ್ಞಾನ ಉಪನ್ಯಾಸಕರು ಭಾಗವಹಿಸಿದ್ದರು. ಸಂಘದ ವತಿಯಿಂದ ಅತಿಥಿಗಳಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು.

ಪ್ರದೀಪ್ ಕೆ ವೈ ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಸುಮಾ ಶೆಟ್ಟಿ ವಂದಿಸಿದರು.

Related posts

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!