ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಅಳದಂಗಡಿ: ದಿ.ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯ ಸ್ಮರಣೆಯಾ ನೆನೆಪಿಗಾಗಿ ಅವರ ಪುತ್ರ ಸಾಮಾಜಿಕ ನೇತಾರ, ಕೊಡುಗೈ ದಾನಿ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ ಇವರು ಹಾಗೂ ಕುಟುಂಬಸ್ಥರು ರಂಗ ಭೂಮಿ ಕಲಾವಿದ ಹಾಗೂ ತುಳು ಚಲನ ಚಿತ್ರದ ನಿರ್ದೇಶಕ ಪ್ರಸಾದ್ ಕುಮಾರ್ ಅರ್ವ ಮತ್ತು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ಶಿರ್ಲಾಲು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ಮೋಕ್ಷಿತ್ ಶಿರ್ಲಾಲು ಸಮೀಕ್ಷಾ ಕುದ್ಯಾಡಿ ಇವರನ್ನು ಸನ್ಮಾನಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯೆಗೆ ಪ್ರೋತ್ಸಾಹ ನೀಡುವ ಸಲುವಾಗಿ ವಿದ್ಯಾ ನಿಧಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಮತ್ತು ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಸದಾನಂದ ಪೂಜಾರಿ ಉಂಗಿಲಬೈಲು ಸಾಧಕರನ್ನು ಪರಿಚಯಿಸಿ ಸ್ವಾಗತಿಸಿದರು.

Leave a Comment

error: Content is protected !!