September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸಿಬ್ಬಂದಿ ಸಭೆ: ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಶಿಸ್ತಿಗೆ ಹೆಚ್ಚಿನ ಆದ್ಯತೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya
error: Content is protected !!