23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಗ್ರಾಮಸ್ಥರಾದ ಮುತ್ತಯ್ಯ ಪೂಜಾರಿ ದಂಪತಿಗಳ ೬೦ನೇ ವರ್ಷದ ವೈವಾಹಿಕ ಜೀವನದ ಸವಿನೆನಪಿಗಾಗಿ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಸಮವಸ್ತ್ರವನ್ನು ವಿತರಿಸಿದ ಶಾಲಾ ಹಳೆ ವಿದ್ಯಾರ್ಥಿ ಶಿವರಾಜ್ ಸನ್ಮಾನಿಸಲಾಯಿತು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಈ ವರ್ಷದ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮಕ್ಕಳನ್ನು ಮರಳಿ ಶಾಲೆಗೆ ಬರುವಂತೆ ಮನವೊಲಿಸಲು ಪೋಷಕರಿಗೆ ವಿನಂತಿಸಿದರು. ಶಾಲೆಯ ಶೈಕ್ಷಣಿಕ ಪ್ರಗತಿಗೆ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ವೇತ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಜಗದೀಶ್, ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಪೋಷಕರು ಭಾಗವಹಿಸಿದ್ದರು.

ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಸ್ವಾಗತಿಸಿದರು. ಈ ವರ್ಷದ ಶಿಕ್ಷಣ ಕಾರ್ಯಕ್ರಮಗಳ ಬಗ್ಗೆ ಅಧ್ಯಾಪಕಿ ರೂಪ ವಿವರಿಸಿದರು. ಶಿಕ್ಷಕ ರಾಜ ವಂದಿಸಿದರು.

Related posts

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
error: Content is protected !!