25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.


ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.

ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.

Related posts

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya
error: Content is protected !!