April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.


ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.

ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!