September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು.


ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು. ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ,’ ನಾವೆಲ್ಲರೂ ಸೇರಿ ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದೇವೆ. ಮುಂದಕ್ಕೆ ಶಾಲಾಭಿವೃದ್ಧಿಯ ಕಾರ್ಯಗಳನ್ನು ಕೂಡಾ ಎಲ್ಲರೂ ಕೈ ಜೋಡಿಸಿ ಜೊತೆ ಸೇರಿ ಮಾಡೋಣ’ ಎಂದರು.

ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಉಪಸ್ಥಿತರಿದ್ದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರ್ವಹಿಸಿದರು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!