22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!