23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya
error: Content is protected !!