22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!