September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಉಜಿರೆ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸರಕಾರಿ ವೈದ್ಯಾಧಿಕಾರಿಗಳು ಭೇಟಿ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾವೂರಿನಿಂದ ಕುಮರಾಜೆ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!